100+Gadegalu in Kannada, ಗಾದೆ ಮಾತುಗಳು, gadegalu information in kannada, 100 kannada gadegalu, proverbs in kannada
100+Gadegalu in Kannada
![](https://i0.wp.com/kannadanew.com/wp-content/uploads/2022/10/100Gadegalu-in-Kannada.jpg?resize=266%2C163&ssl=1)
ಈ ಲೇಖನಿಯಲ್ಲಿ 100ಕ್ಕೂ ಹೆಚ್ಚು ಗಾದೆ ಮಾತುಗಳನ್ನು ನಿಮಗೆ ನೀಡಿದ್ದೇವೆ. ನಮ್ಮ post ನಲ್ಲಿ ನಿಮಗೆ ಅನುಕೂಲವಾಗುವಂತೆ ಗಾದೆ ಮಾತುಗಳನ್ನು ತಿಳಿಸಿದ್ದೇವೆ. ಇದರ ಸಹಾಯವನ್ನು ಪಡೆದುಕೊಳ್ಳಿ.
ಗಾದೆ ಮಾತುಗಳು
- ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
- ಕುಣಿಯಲಾರದವಳು ನೆಲ ಡೊಂಕೆಂದಳಂತೆ
- ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು
- ಕೈ ಕೆಸರಾದರೆ ಬಾಯಿ ಮೊಸರು.
- ಹೆಣ್ಣಿಂದ ರಾವಣ ಕೆಟ್ಟ , ಮಣ್ಣಿಂದ ಕೌರವ ಕೆಟ್ಟ
- ಬೆಂಕಿ ಬಿದ್ದ ಮೇಲೆ ಬಾವಿ ತೋಡಿದಂತೆ
- ಗಾಳಿ ಬಂದಾಗ ತೂರಿಕೋ
- ನೀರಿದ್ದರೆ ಊರು ನಾರಿ ಇದ್ದರೆ ಮನೆ
- ಆನೆ ಸತ್ತರೂ ಸಾವಿರ ಇದ್ದರೂ ಸಾವಿರ
- ಹಾಸಿಗೆ ಇದ್ದಷ್ಟು ಕಾಲು ಚಾಚು
- ಗಾಳಿಯಲ್ಲಿ ಗೋಪುರ ಕಟ್ಟಿದಂತೆ
- ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
- ಓದಿ ಓದಿ ಮರುಳಾದ ಕೂಚು ಭಟ್ಟ
- ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ
- ತರುಬು ಇದ್ದರೆ ಹರುಬು ನಿಂತೀತೇ
- ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ
- ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ
- ಭಂಗಿ ದೇವರಿಗೆ ಹೆಂಡಗುಡುಕ ಪೂಜಾರಿ
- ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
- ತಾ ಕಾಣದ ದೇವರು ಪೂಜಾರಿಗೆ ವರ ಕೊಟ್ಟೀತೇ?
- ವಿನಯದಿಂದ ವಿಶ್ವವನ್ನು ಗೆಲ್ಲು, ಪರನಿಂದೆ ಮಹಾಪಾಪ.
- ಅಳಿಯನ ಕುರುಡು ಬೆಳಗಾದರೆ ಗೊತ್ತಾಗತ್ತೆ
- ಕದ್ದ ರೊಟ್ಟಿ ಬೇರೆ ದೇವರ ಪ್ರಸಾದ ಬೇರೆ.
- ಹಾರ್ಸೋನೋ ತೀರ್ಸೋನೋ.
- ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
- ಬೆರಳು ತೋರಿಸಿದರೆ ಹಸ್ತ ನು೦ಗಿದನ೦ತೆ.
- ಸಮತೆ ತೊಟ್ಟು ಪದವಿ ಮುಟ್ಟು
- ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
- ಖೀರು ಕುಡಿದವ ಓಡಿಹೋದ, ನೀರು ಕುಡಿದವ ಸಿಕ್ಕಿಬಿದ್ದ.
- ಕ೦ತೆಗೆ ತಕ್ಕ ಬೊ೦ತೆ.
- ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
- ತಾಯಿಯ ಪ್ರೀತಿ ಸುಖವಾದದ್ದು, ತಂದೆಯ ಪ್ರೀತಿ ಮಧುರವಾದದ್ದು.
- ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ
- ಉಪದೇಶಕ್ಕಿಂತ ಉದಾಹರಣೆ ಲೇಸು
- ಮನಸ್ಸಿದ್ದರೆ ಮಾರ್ಗವಿದೆ
- ತೊಟ್ಟಿಲ ತೂಗುವ ಕೈ ದೇಶವನ್ನು ಆಳಬಲ್ಲದು
- ಕೊಡಲಿ ಕಾವು ಕುಲಕ್ಕೆ ಮೂಲ
- ಹಳೆ ಗಂಡನ ಪಾದವೇ ಗತಿ
- ಹಲ್ಲು ಕಿತ್ತ ಹಾವು
- ತಾನುಂಟು ಮೂರು ಲೋಕವುಂಟು
- ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
- ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
- ತಾ ಕಳ್ಳೆ ಪರರ ನಂಬಳು, ಹಾದರಗಿತ್ತಿ ಗಂಡನ ನಂಬಳು
- ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
- ಕಾಲಕ್ಕೆ ತಕ್ಕಂತೆ ನಡಿಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
- ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
- ಉಂಬಾಗ ಉಡುವಾಗ ಊರೆಲ್ಲ ನೆಂಟರು
- ಹಾರೋ ಹಕ್ಕಿಗೆ ಹಾದರ ಕಟ್ಟಿದರು.
- ಪ್ರಸ್ತಕ್ಕಿಲ್ಲದ ಮಾತು ಹತ್ತುಸಾವಿರವಿದ್ದೇನು
- ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
- ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
- ಅತ್ತೆಗೊಂದು ಕಾಲ; ಸೊಸೆಗೊಂದು ಕಾಲ
- ಹಲ್ಲಿದ್ದವನಿಗೆ ಕಡಲೆ ಇಲ್ಲ, ಕಡಲೆಯಿದ್ದವನಿಗೆ ಹಲ್ಲಿಲ್ಲ.
- ಭಲೆ ಜಟ್ಟಿ ಅಂದ್ರೆ ಕೆಮ್ಮಣ್ಣು ಮುಕ್ಕಿದ
- ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?
- ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ
- ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
- ಅಳಿವುದೇ ಕಾಯ ಉಳಿವುದೇ ಕೀರ್ತಿ
- ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು
- ಒಲ್ಲದ ಗ೦ಡನಿಗೆ ಮೊಸರಲ್ಲೂ ಕಲ್ಲು.
- ಬಳ್ಳಿಗೆ ಕಾಯಿ ಭಾರವೇ
- ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ
- ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
- ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
- ನಾಯಿಯನ್ನು ಹೊಡೆಯಲು ಬಣ್ಣದ ಕೋಲೇ ?
- ದೊಡ್ಡವರು ಹೇಳಿದ ಹಾಗೆ ಮಾಡು; ಮಾಡಿದ ಹಾಗೆ ಮಾಡಬೇಡ
- ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು
- ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ
- ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ
- ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
- ಯಾವ ದೇವರು ವರ ಕೊಟ್ಟರೂ ಗ೦ಡನಿಲ್ಲದೆ ಮಕ್ಕಳಾಗದು.
- ತಾ ಕಳ್ಳೆ ಪರರ ನಂಬಳು,
- ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
- ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
- ತನ್ನೂರಲಿ ರಂಗ, ಪರೂರಲಿ ಮಂಗ
- ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್ತಂತೆ
- ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು
- ಕಾಲಿದ್ದವನಿಗೆ ಆಟ, ಕಣ್ಣಿದ್ದವನಿಗೆ ನೋಟ.
- ಜ್ಞಾನಿ ಬಂದರೆ ಗೌರವಿಸು, ಹೀನ ಬಂದರೆ ತ್ಯಜಿಸು.
- ಮೂಗು ಹಿಡಿದರೆ ಬಾಯಿ ತಾನೇ ತೆರೆಯುವುದು
- ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ.
- ಬೆಕ್ಕಿಗೆ ಚೆಲ್ಲಾಟ: ಇಲಿಗೆ ಪ್ರಾಣಸಂಕಟ
- ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
- ತಾಯಂತೆ ಕರು ನಾಯಂತೆ ಬಾಲ ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
- ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
- ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
- ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು
- ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು
- ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
- ಅರಗಿನಂತೆ ತಾಯಿ, ಮರದಂತೆ ಮಕ್ಕಳು
- ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
- ಅತಿ ಆಸೆ ಗತಿಗೇಡು
- ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
- ತನಗಿಲ್ಲದ್ದು ಎಲ್ಲಿದ್ದರೇನು
- ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
- ತೂತು ಗತ್ತಲೇಲಿ ತಾತನ ಮದುವೆ
- ಮಾತು ಬೆಳ್ಳಿ, ಮೌನ ಬಂಗಾರ.
- ಸಜ್ಜನರ ಸಂಗ ಹೆಜ್ಜೇನು ಸವಿದಂತೆ
- ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
- ಅ೦ಗ ತೋರಿಸಿ ಅರ್ಧಾ೦ಗಿಯಾದಳು.
- ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
- ಗಾಳಿಯಿಂದ ಹಾರುವುದೋ ತಿರೋಕಲ್ಲು ಮಳೇಲಿ ಬಿದ್ದರೆ ಮರಕ್ಕಿಂತಾ ಕಡೆಯಾದೀತೇ
- ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
- ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
- ಯಾರನ್ನ ನಂಬಿದರು ಆರೈದು ನಂಬಬೇಕು
- ಒಲಿದರೆ ನಾರಿ ಮುನಿದರೆ ಮಾರಿ
- ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
- ಬರಗಾಲದಲ್ಲಿ ಅಧಿಕ ಮಾಸ.
- ಆಕಳ ಹೊಟ್ಟೆಯಲ್ಲಿ ಅಚ್ಚೇರು ಬ೦ಗಾರ.
- ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು
ಇತರೆ ವಿಷಯಗಳು: