ಇಂದಿರಾ ಗಾಂಧಿ ಜೀವನ ಚರಿತ್ರೆ | Indira Gandhi Biography in Kannada

0
1105
ಇಂದಿರಾ ಗಾಂಧಿ ಜೀವನ ಚರಿತ್ರೆ | Indira Gandhi Biography in Kannada
ಇಂದಿರಾ ಗಾಂಧಿ ಜೀವನ ಚರಿತ್ರೆ | Indira Gandhi Biography in Kannada

ಇಂದಿರಾ ಗಾಂಧಿ ಜೀವನ ಚರಿತ್ರೆ Indira Gandhi Biography Indira Gandhi Jeevana Charitre in Kannada


Contents

ಇಂದಿರಾ ಗಾಂಧಿ ಜೀವನ ಚರಿತ್ರೆ

Indira Gandhi Biography in Kannada
Indira Gandhi Biography in Kannada

ಈ ಲೇಖನಿಯಲ್ಲಿ ಇಂದಿರಾ ಗಾಂಧಿಯವರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ Post ನಲ್ಲಿ ನೀಡಲಾಗಿದೆ.

ಇಂದಿರಾ ಗಾಂಧಿ

ನವೆಂಬರ್ 19, 1917ರಂದು ಸುಪ್ರಸಿದ್ಧ ಕುಟುಂಬವೊಂದರಲ್ಲಿ ಜನಿಸಿದ ಶ್ರೀಮತಿ ಇಂದಿರಾ ಗಾಂಧಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಪುತ್ರಿ. ಅವರು ಸ್ವಿಟ್ಜಲ್ಯಾಂಡ್ನ ಎಕೊಲೆ ನವೊಲೆ, ಬೆಕ್ಸ್, ಜಿನೆವಾದ ಎಕೊಲೆ ಇಂಟರ್ನ್ಯಾಷನಲ್, ಪೂನಾ ಮತ್ತು ಮುಂಬಯಿಯ ಪ್ಯೂಪಿಲ್ಸ್ ಓನ್ ಸ್ಕೂಲ್, ಬ್ರಿಸ್ಟ್ಟಾಲ್ನ ಬ್ಯಾಡ್ಮಿಂಟನ್ ಸ್ಕೂಲ್, ಶಾಂತಿನಿಕೇತನದ ವಿಶ್ವಭಾರತಿ, ಆಕ್ಸ್ಫರ್ಡ್ನ ಸೊಮರ್ವಿಲ್ಲೆ ಕಾಲೇಜ್ ಮುಂತಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ವಿಧ್ಯಾಭ್ಯಾಸ ಪೂರೈಸಿದರು. ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳು ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನೂ ನೀಡಿ ಗೌರವಿಸಿದವು. ಅತ್ಯುತ್ತಮ ಶೈಕ್ಷಣಿಕ ಹಿನ್ನೆಲೆ ಹೊಂದಿದ್ದ ಅವರು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಉನ್ನತ ಶ್ರೇಣಿಯನ್ನು ಪಡೆದವರು. ಶ್ರೀಮತಿ ಇಂದಿರಾ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿದವರು. ಅಸಹಕಾರ ಚಳುವಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡಲು 1930ರಲ್ಲಿ ಅವರು ‘ಬಾಲ ಚರಕ ಸಂಘ’ವನ್ನು ಮತ್ತು ಮಕ್ಕಳ ‘ವಾನರ ಸೇನೆ’ಯನ್ನು ಸ್ಥಾಪಿಸಿದರು. 1942ರಲ್ಲಿ ಅವರನ್ನು ಬಂಧಿಸಲಾಯಿತು. 1947ರಲ್ಲಿ ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ಇಂದಿರಾ ಅವರು ದೆಹಲಿಯ ಕೋಮುಗಲಭೆ ಪೀಡಿತ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಿದರು.

ವೈವಾಹಿಕ ಜೀವನ

ಇಂದಿರಾ ಮತ್ತು ಫಿರೋಜ್ ಗಾಂಧಿಯವರು ಭಾರತಕ್ಕೆ ಹಿಂದಿರುಗಿದಾಗ, ಪರಸ್ಪರ ಪ್ರೀತಿಸುತ್ತಿದ್ದರು. ವೈದ್ಯರ ಸೂಚನೆಯನ್ನೂ ಮೀರಿ ಅವರು ಮದುವೆಯಾಗಲು ನಿರ್ಧರಿಸಿದರು.ಫಿರೋಜ್ ಗಾಂಧಿಯವರಲ್ಲಿದ್ದ ಮುಕ್ತ ಮನೋಭಾವ, ಹಾಸ್ಯ ಪ್ರಜ್ಞೆ ಮತ್ತು ಆತ್ಮ-ವಿಶ್ವಾಸವನ್ನು ಇಂದಿರಾ ಇಷ್ಟಪಟ್ಟರು. ತಮ್ಮ ಮಗಳು ಅಷ್ಟು ಬೇಗ ಮದುವೆಯಾಗುವ ಆಲೋಚನೆ ನೆಹರುಗೆ ಇಷ್ಟವಾಗಲಿಲ್ಲ. ಈ ಪ್ರೇಮ ವಿವಾಹವನ್ನು ತಪ್ಪಿಸಲು ಮಹಾತ್ಮಾಗಾಂಧಿಯವರ ಸಹಾಯವನ್ನು ಪಡೆಯಲು ಅವರು ಪ್ರಯತ್ನಿಸಿದರು. ಇಂದಿರಾ ಹಠ ಹಿಡಿದರು. 1942 ಮಾರ್ಚ್‌ನಲ್ಲಿ ಹಿಂದು ಆಚರಣೆಯಂತೆ ಮದುವೆ ನೆರವೇರಿತು. ಫಿರೋಜ್ ಮತ್ತು ಇಂದಿರಾ ಇಬ್ಬರೂ ಸಹ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸದಸ್ಯರಾಗಿದ್ದರು. 1942ರಲ್ಲಿ ನಡೆದ ‘ಭಾರತ ಬಿಟ್ಟು ತೊಲಗಿ’ ಚಳವಳಿಯಲ್ಲಿ ಭಾಗವಹಿಸಿದಾಗ ಅವರಿಬ್ಬರೂ ಬಂಧನಕ್ಕೊಳಗಾದರು. ಸ್ವಾತಂತ್ರ್ಯಾ ನಂತರ, ಫಿರೋಜ್‌ ಚುನಾವಣಾ ಕಣಕ್ಕೆ ಇಳಿದರು. ಉತ್ತರ ಪ್ರದೇಶದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾದರು. ಅವರ ಇಬ್ಬರು ಮಕ್ಕಳಾದ ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಹುಟ್ಟಿದ ನಂತರ, ಬಿಗಡಾಯಿಸಿದ ಅವರ ಸಂಬಂಧ ಬೇರ್ಪಡುವಷ್ಟರ ಮಟ್ಟಿಗೆ ಬಂತು. ಮರು-ಚುನಾಯಿತರಾದ ಸ್ವಲ್ಪ ದಿನಗಳಲ್ಲೇ ಫಿರೋಜ್‌ ಹೃದಯಾಘಾತಕ್ಕೆ ಈಡಾದರು. ಇದರಿಂದ ಮತ್ತೆ ರಾಜಿಯಾದರು. ಇವರಿಬ್ಬರ ಸಂಬಂಧ ಫಿರೋಜ್ ಗಾಂಧಿ 1960ರ ಸೆಪ್ಟೆಂಬರ್‌ನಲ್ಲಿ ನಿಧನರಾಗುವ ಕೆಲವು ವರ್ಷಗಳ ಮುಂದಿನವರೆಗೆ ಉಳಿದಿತ್ತು.

ಇಂದಿರಾ ಗಾಂಧಿ ರಾಜಕೀಯ ಜೀವನ

ಶಾಸ್ತ್ರಿಯವರ ಹಠಾತ್ ಮರಣಾನಂತರ ಇಂದಿರಾಗಾಂಧಿ ಪ್ರಧಾನ ಮಂತ್ರಿಯಾದರು. ಇವರನ್ನು ಪ್ರಧಾನಿ ಗದ್ದುಗೆಗೇರಿಸುವಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಕೆ.ಕಾಮರಾಜ್ಅವರದ್ದು ಪ್ರಮುಖ ಪಾತ್ರ. ಗಾಂಧಿ ಯವರಿಂದ ಜನಾನುರಾಗಿ ರಾಜಕೀಯ ಸಿದ್ಧಾಂತಸ್ಥಾಪನೆ. ಚತುರ ಎದುರಾಳಿಗಳ ವಿರುದ್ಧ ಚುನಾವಣೆ ಗೆಲ್ಲುವಲ್ಲಿ ತನ್ನ ಸಾಮರ್ಥ್ಯದ ಪ್ರದರ್ಶನ. ಅವರಿಂದ ಹೆಚ್ಚು ಎಡ-ಪಕ್ಷೀಯ ಆರ್ಥಿಕ ನೀತಿಗಳ ಅನುಷ್ಠಾನ ಮತ್ತು ಕೃಷಿ ಉತ್ಪಾದಕತೆಗೆ ಬೆನ್ನು ತಟ್ಟಿ ಪ್ರೋತ್ಸಾಹ. ೧೯೭೧ರಲ್ಲಿ ಪಾಕಿಸ್ಥಾನದೊಂದಿಗೆ ನಡೆದ ಕದನದಲ್ಲಿ ಭಾರತದ್ದು ನಿರ್ಣಾಯಕ ಗೆಲುವು. ಈ ಸಂದರ್ಭದಲ್ಲಿ ಇಂದಿರಾ ಪ್ರಧಾನ ಮಂತ್ರಿ. ೧೯೭೫ ಅವರ ಪಾಲಿಗೆ ಒಂದು ಅಭದ್ರತೆಯ ಅವಧಿ. ಇದರಿಂದಾಗಿ ಆಗ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆ. ದೀರ್ಘ ಕಾಲೀನ ನಿರಂಕುಶ ಪ್ರಭುತ್ವ. ಪರಿಣಾಮವಾಗಿ, ಸೋಲರಿಯದ ಕಾಂಗ್ರೆಸ್ ಪಕ್ಷಕ್ಕೆ 1977ರ ಸಾರ್ವತ್ರಿಕ ಚುನಾವಣೆಯಲ್ಲಿ ಪರಾಭವ. 1980 ಚುನಾವಣೆ ಯಲ್ಲಿ ಕಾಂಗ್ರೆಸ್‌ಗೆ ಮತ್ತೆ ಜಯ. ಪ್ರಧಾನ ಮಂತ್ರಿ ಅಧಿಕಾರ ಮತ್ತೆ ಇಂದಿರಾ ಗಾಂಧಿ ಕೈಗೆ. ೧೯೮೪ ಜೂನ್‌ನಲ್ಲಿ, ದಂಗೆಕೋರರನ್ನು ಬಂಧಿಲೆಂದು ಗಾಂಧಿ ಆದೇಶದ ಮೇರೆಗೆ ಸಿಖ್‌ರ ಪವಿತ್ರ ಸ್ವರ್ಣ ಮಂದಿರದೊಳಕ್ಕೆ ಭಾರತೀಯ ಸೇನಾ ಪಡೆಯಿಂದ ಬಲವಂತ ಪ್ರವೇಶ. ಈ ಕಾರ್ಯಾಚರಣೆಯ ಪ್ರತೀಕಾರವಾಗಿ ೧೯೮೪ ಅಕ್ಟೋಬರ್ ೩೧ರಂದು ಇಂದಿರಾ ಗಾಂಧಿ ಹತ್ಯೆಗೆ ತುತ್ತಾದರು.

ಪ್ರಧಾನಿಯಾಗಿ ಇಂದಿರಾಗಾಂಧಿ,

ಮೊದಲ ಅವಧಿ

ದೇಶೀಯ ನೀತಿ :

1966ರಲ್ಲಿ ಗಾಂಧಿ ಪ್ರಧಾನ ಮಂತ್ರಿಯಾದಾಗ ಕಾಂಗ್ರೆಸ್ ಎರಡು ಹೋಳಾಯಿತು. ಒಂದು ಬಣ ಗಾಂಧಿ ನೇತೃತ್ವದ ಸಮಾಜವಾದಿಗಳದ್ದು ಮತ್ತೊಂದು ಬಣ ಮೊರಾರ್ಜಿ ದೇಸಾಯಿ ನೇತೃತ್ವದ ಸಂಪ್ರದಾಯವಾದಿಗಳದ್ದು.ರಾಮ್‌ಮನೋಹರ್ ಲೋಹಿಯ ಇವರನ್ನು ಗುಂಗಿ ಗುಡಿಯ ಅಂದರೆ ‘ಮೂಕಬೊಂಬೆ’ ಎಂದು ಕರೆದರು. ಆಂತರಿಕ ಸಮಸ್ಯೆಗಳಿಂದಾದ ಪರಿಣಾಮ, 1967ರ ಚುನಾವಣೆ ಫಲಿತಾಂಶದಲ್ಲ್ಲಿಕಾಣಿಸಿಕೊಂಡಿತು. ಲೋಕಸಭೆಯ 545 ಸ್ಥಾನ ಗಳಲ್ಲಿ ಕಾಂಗ್ರೆಸ್ 297 ಸ್ಥಾನಗಳನ್ನು ಗೆದ್ದಿತಾದರೂ ಸುಮಾರು 60 ಸ್ಥಾನಗಳನ್ನು ಕಳೆದುಕೊಂಡಿತು. ಅವರು ದೇಸಾಯಿಯವರಿಗೆ ಭಾರತದ ಉಪಪ್ರಧಾನ ಮಂತ್ರಿ ಹುದ್ದೆ ಮತ್ತು ಹಣಕಾಸು ಖಾತೆ ಮಂತ್ರಿಯಾಗುವ ಅವಕಾಶ ನೀಡಬೇಕಾದ ಸಂದರ್ಭ ಒದಗಿ ಬಂತು. ದೇಸಾಯಿ ಅವರೊಂದಿಗೆ ಹಲವು ಭಿನ್ನಾಭಿಪ್ರಾಯದ ನಂತರ 1969ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವಿಭಜನೆಗೆ ಈಡಾಯಿತು. ಅವರು ಸಮಾಜವಾದಿ ಮತ್ತು ಕಮ್ಯೂನಿಸ್ಟ್ ಪಕ್ಷಗಳ ಬೆಂಬಲದಿಂದ ಮುಂದಿನ ಎರಡು ವರ್ಷ ಆಡಳಿತ ನಡೆಸಿದರು. ಅದೇ ವರ್ಷ ಅಂದರೆ, 1969 ಜುಲೈನಲ್ಲಿ ಅವರು ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿದರು.

1971ರಲ್ಲಿ ಪಾಕಿಸ್ಥಾನದೊಂದಿಗೆ ಯುದ್ಧ :

ಪೂರ್ವ ಪಾಕಿಸ್ಥಾನದ ನಾಗರಿಕರ ವಿರುದ್ಧ ಪಾಕಿಸ್ಥಾನ ಸೇನಾ ಪಡೆ ವ್ಯಾಪಕ ದೌರ್ಜನ್ಯ ನಡೆಸಿತು. ಸುಮಾರು 10 ದಶಲಕ್ಷ ನಿರಾಶ್ರಿತರು ಭಾರತಕ್ಕೆ ವಲಸೆ ಬಂದು ದೇಶದಲ್ಲಿ ಅಭದ್ರತೆ ಸೃಷ್ಟಿಸಿದರು ಮತ್ತು ಆರ್ಥಿಕ ಮುಗ್ಗಟ್ಟಿಗೆ ಕಾರಣರಾದರು. ರಿಚರ್ಡ್ ನಿಕ್ಸನ್‌ ನೇತೃತ್ವದ ಅಮೆರಿಕ ಸಂಯುಕ್ತ ಸಂಸ್ಥಾನ ಪಾಕಿಸ್ಥಾನಕ್ಕೆ ಬೆಂಬಲ ನೀಡಿತು ಮತ್ತು ಯುದ್ಧ ಮಾಡದ ಹಾಗೆ ಭಾರತಕ್ಕೆ ಎಚ್ಚರಿಕೆ ನೀಡುವ UN ನಿರ್ಣಯ ಕೈಗೊಂಡಿತು. ನಿಕ್ಸನ್‌ಗೆ ಇಂದಿರಾರನ್ನು ಕಂಡರೆ ವೈಯಕ್ತಿಕವಾಗಿ ಸ್ವಲ್ಪವೂ ಇಷ್ಟವಾಗುತ್ತಿರಲಿಲ್ಲ. ರಾಜ್ಯದ ಕಾರ್ಯದರ್ಶಿ ಹೆನ್ರಿ ಕಿಸಿಂಜರ್‌ ಜೊತೆಗಿನ ಖಾಸಗಿ ಸಂಪರ್ಕದಲ್ಲಿ ಇಂದಿರಾರನ್ನು “ಮಾಟಗಾತಿ” ಮತ್ತು “ಚತುರ ಗುಳ್ಳೆನರಿ” ಎಂದು ಟೀಕಿಸಿದ್ದಾರೆ (ಈ ಸಂಗತಿ ರಾಜ್ಯ ಆಡಳಿತ ವಿಭಾಗದಿಂದ ಈಗ ಹೊರಬಿದ್ದಿದೆ). ಸ್ನೇಹ ಮತ್ತು ಸಹಕಾರ ಒಪ್ಪಂದವೊಂದಕ್ಕೆ ಇಂದಿರಾ ಸಹಿ ಹಾಕಿದರು. ಇದರಿಂದ ರಾಜಕೀಯ ಬೆಂಬಲ ಮತ್ತು UNನಲ್ಲಿ ಸೋವಿಯತ್ ನಿರಾಕರಣಾಧಿಕಾರ ಸಿಕ್ಕಿತು. 1971ರ ಯುದ್ಧದಲ್ಲಿ ಭಾರತ ಜಯಗಳಿಸಿತು ಹಾಗೂ ಬಾಂಗ್ಲಾದೇಶ ಹುಟ್ಟಿಕೊಂಡಿತು.

ವಿದೇಶೀ ನೀತಿ :

ಹೊಸ ಪಾಕಿಸ್ಥಾನಿ ಅಧ್ಯಕ್ಷ ಜುಲ್ಫಿಕಾರ್ ಆಲಿ ಭುಟ್ಟೊ ಅವರನ್ನು ಇಂದಿರಾ ವಾರಾವಧಿಯ ಶಿಮ್ಲಾ ಶೃಂಗ ಸಭೆಗೆ ಆಮಂತ್ರಿಸಿದರು. ಮಾತುಕತೆ ವಿಫಲವಾಯಿತಾದರೂ, ರಾಜ್ಯದ ಇಬ್ಬರು ಮುಖಂಡರು ಶಿಮ್ಲಾ ಒಪ್ಪಂದಕ್ಕೆ ಅಂತಿಮವಾಗಿ ಸಹಿ ಹಾಕಿದರು. ಮಾತುಕತೆ ಮತ್ತು ಶಾಂತಿ ಸಂಧಾನದ ಮೂಲಕ ಕಾಶ್ಮೀರ ವಿವಾದವನ್ನು ಪರಿಹರಿಸಿಕೊಳ್ಳಬೇಕು ಎಂದು ಅದು ಎರಡೂ ದೇಶಗಳನ್ನು ಪರಿಮಿತಿಯಲ್ಲಿಟ್ಟಿತು. ನಿಕ್ಸನ್‌ ಜೊತೆಗಿನ ಇವರ ಬದ್ಧ ದ್ವೇಷದಿಂದಾಗಿ, ಯುನೈಟೆಡ್ ಸ್ಟೇಟ್ಸ್‌ ಸಂಬಂಧವು ದೂರವಾಗುತ್ತಾ ಹೋಯಿತು ಮತ್ತು ಸೋವಿಯತ್ ಒಕ್ಕೂಟದೊಂದಿಗಿನ ಸಂಬಂಧವು ನಿಕಟವಾಯಿತು. ಗಡಿ ನಿಯಂತ್ರಣ ರೇಖೆಯನ್ನು ಶಾಶ್ವತ ಎಲ್ಲೆ ಎಂದು ಮಾಡದೇ ಇದ್ದುದಕ್ಕಾಗಿ ಕೆಲವರಿಂದ ಇಂದಿರಾ ಗಾಂಧಿ ಟೀಕೆಗೊಳಗಾದರು ಹಾಗೂ ಪಾಕಿಸ್ತಾನದಿಂದ ಆಕ್ರಮಿತವಾದ ಕಾಶ್ಮೀರದ ಭಾಗವನ್ನು ಪಾಕಿಸ್ಥಾನದಿಂದ ಹಿಂಪಡೆಯಬೇಕಿತ್ತು ಎಂದು ಇನ್ಕೆಲವರು ಅಭಿಪ್ರಾಯ ಪಟ್ಟರು. ಪಾಕಿಸ್ಥಾನದ 93,000 ಯುದ್ಧ ಕೈದಿಗಳು ಭಾರತದ ವಶದಲ್ಲಿದ್ದರು. ವಿವಾದ ಇತ್ಯರ್ಥಕ್ಕೆ ವಿಶ್ವಸಂಸ್ಥೆಯಾಗಲೀ ಅಥವಾ ಹೊರಗಿನವರು ಯಾರೇ ಆಗಲಿ ಮೂಗುತೂರಿಸುವುದನ್ನು ಒಪ್ಪಂದವು ತಕ್ಷಣವೇ ನಿವಾರಿಸಿತು. ಪಾಕಿಸ್ಥಾನ ಸದ್ಯದಲ್ಲೇ ಮಾಡಬಹುದಾದ ಭಾರೀ ದಾಳಿಯ ಸಂಭವನೀಯತೆಯನ್ನು ಇದು ತಗ್ಗಿಸಿತು. ಸಮಸ್ಯೆಯು ಸೂಕ್ಷ್ಮದ್ದಾದ್ದರಿಂದ ಸಂಪೂರ್ಣ ಶರಣಾಗತಿಯನ್ನು ಭುಟ್ಟೊರಿಂದ ಕೋರದೆ, ಅವರು ಪಾಕಿಸ್ಥಾನ ತಹಬಂದಿಗೆ ಬರಲು ಮತ್ತು ಸ್ಥಿರತೆ ಕಾಪಾಡಿಕೊಳ್ಳಲು ಅನುಮತಿಸಿದರು. ವ್ಯವಹಾರ ಸಂಬಂಧಗಳು ಮುಂದುವರಿಯಿತಾದರೂ ಹೆಚ್ಚಿನ ಸಂಪರ್ಕ-ಸಂಬಂಧಕ್ಕೆ ಎಷ್ಟೋ ವರ್ಷಗಳವರೆಗೆ ಬಾಗಿಲು ಮುಚ್ಚಿತ್ತು.

ರೂಪಾಯಿ ಮೌಲ್ಯದಲ್ಲಿ ಇಳಿಕೆ :

ಇಂದಿರಾ ಆಡಳಿತ 1960ರ ಉತ್ತರಾರ್ಧದಲ್ಲಿ US ಡಾಲರ್ ಎದುರು ರುಪಾಯಿ ಮೌಲ್ಯವನ್ನು 40% ನಷ್ಟು ಇಳಿಸಿತು. ಒಂದು ಡಾಲರ್‌ಗೆ ಇದ್ದ ರೂ.4ರ ಬೆಲೆ ರೂ.7 ಆಯಿತು. ವಾಣಿಜ್ಯ ವರ್ಧನೆ ಇದರ ಉದ್ದೇಶವಾಗಿತ್ತು.

ಪರಮಾಣು ಶಸ್ತ್ರ ಯೋಜನೆ :

ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಒಡ್ಡಿದ ಪರಮಾಣು ಬೆದರಿಕೆಗೆ ಉತ್ತರವಾಗಿ ಮತ್ತು ಪರಮಾಣು ಬಲಿಷ್ಠ ರಾಷ್ಟ್ರಗಳು ಸ್ವತಂತ್ರವಾಗಿರುವಂತೆ ಭಾರತವೂ ತನ್ನ ಸ್ಥಿರತೆ ಮತ್ತು ಭದ್ರತಾ ಹಿತ ರಕ್ಷಣೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ 1967ರಲ್ಲಿ ರಾಷ್ಟ್ರೀಯ ಪರಮಾಣು ಯೋಜನೆಯನ್ನು ಗಾಂಧಿ ಪ್ರಾರಂಭಿಸಿದರು. 1974ರಲ್ಲಿ ಭಾರತವು ರಾಜಸ್ಥಾನದ ಪೊಖ್ರಾನ್‌ನ ಬಂಜರು ಹಳ್ಳಿಯಲ್ಲಿ ‘ಸ್ಮೈಲಿಂಗ್ ಬುದ್ಧʼ ಎಂಬ ಅನಧಿಕೃತ ಕೋಡ್ ಹೆಸರು ಹೊಂದಿದ್ದ ರಹಸ್ಯ ಪರಮಾಣು ಪರೀಕ್ಷೆಯನ್ನು ಭೂಗರ್ಭದೊಳಗೆ ಯಶಸ್ವಿಯಾಗಿ ಮಾಡಿತು. ನಡೆಸಲಾದ ಪರೀಕ್ಷೆಯು ಶಾಂತಿಯ ಉದ್ಧೇಶಕ್ಕಾಗಿ ಎಂದು ವಿವರಿಸುತ್ತಾ, ಭಾರತವು ಪ್ರಪಂಚದ ಅತಿಕಿರಿಯ ಪರಮಾಣು ಶಕ್ತಿಯಾಗಿ ಹೊರಹೊಮ್ಮಿತು.

ಎರಡನೇ ಅವಧಿ (1971-1975)

1971ರ ಜನಾದೇಶದ ನಂತರ ಇಂದಿರಾ ಸರಕಾರವು ಮಹತ್ತರವಾದ ಸಮಸ್ಯೆಗಳನ್ನು ಎದುರಿಸಿತು. ಆಂತರಿಕ ಸ್ವರೂಪದಿಂದಾಗಿ ಕಾಂಗ್ರೆಸ್ ಪಕ್ಷದಲ್ಲಿ ಒಡಕುಂಟಾಯಿತು. ಅನೇಕ ಭಾಗಗಳಾಗಿ ವಿಭಜಿತಗೊಂಡ ಕಾಂಗ್ರೆಸ್‌ಗೆ ಚುನಾವಣಾ ದೃಷ್ಟಿಯಿಂದ ಇವರ ಸಂಪೂರ್ಣ ಮುಖಂಡತ್ವದ ಅನಿವಾರ್ಯ ಸ್ಥಿತಿ ನಿರ್ಮಾಣವಾಯಿತು. ‘ಗರೀಬಿ ಹಟಾವೊ’ ಎಂದು 1971ರಲ್ಲಿ ಗಾಂಧಿ ಘೋಷಿಸಿದರು. ಗ್ರಾಮೀಣ ಮತ್ತು ನಗರ ಬಡತನದ ಆಧಾರದ ಮೇಲೆ ಗಾಂಧಿಗೆ ಸ್ವತಂತ್ರ ರಾಷ್ಟ್ರೀಯ ಬೆಂಬಲ ನೀಡುವ ಉದ್ದೇಶದೊಂದಿಗೆ ಬಡತನ ನಿರ್ಮೂಲನಾ ಯೋಜನೆ ಮತ್ತು ಗರೀಬಿ ಹಟಾವೊ ಘೋಷಣೆ ವಿನ್ಯಾಸಗೊಂಡಿದ್ದವು. ರಾಜ್ಯದಲ್ಲಿನ ಪ್ರಬಲ ಗ್ರಾಮೀಣ ಜಾತಿಗಳನ್ನು, ಸ್ಥಳೀಯ ಸರಕಾರವನ್ನು ಮತ್ತು ನಗರ ಪ್ರದೇಶದ ವಾಣಿಜ್ಯ ವರ್ಗದವರನ್ನೂ ಉಪೇಕ್ಷಿಸಲು ಇದು ಅವರಿಗೆ ಇಂಬು ನೀಡಿತು. ಧ್ವನಿ ಅಡಗಿದ್ದ ಬಡ ಜನತೆಗೆ ರಾಜಕೀಯವಾಗಿ ಬೆಲೆ ಸಿಕ್ಕಿತು ಮತ್ತು ರಾಜಕೀಯ ಸ್ಥಿತಿ ದಕ್ಕಿತು. ಗರೀಬಿ ಹಟಾವೊ ಆಂದೋಳನದ ಯೋಜನೆಗಳು, ಸ್ಥಳೀಯವಾಗಿ ಕಾರ್ಯರೂಪಕ್ಕೆ ಬಂದರೂ ಸಹ, ನವದೆಹಲಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಿಧಿ ನೆರವು ಪಡೆದು ಅಭಿವೃದ್ಧಿ ಗಳಿಸಿ, ಮೇಲ್ವಿಚಾರಣೆ ಮಾಡಲ್ಪಟ್ಟವು ಮತ್ತು ಸಿಬ್ಬಂದಿವರ್ಗವನ್ನು ಪಡೆದವು. “ರಾಷ್ಟ್ರಾದ್ಯಂತ ವಿನಿಯೋಗಿಸುವ ಬಹುದೊಡ್ಡ ಸಂಪನ್ಮೂಲಗಳೊಂದಿಗೆ ಈ ಯೋಜನೆಗಳು ಕೇಂದ್ರ ರಾಜಕೀಯ ನಾಯಕತ್ವವನ್ನು ಒದಗಿಸಿದವು.” ಗರೀಬಿ ಹಟಾವೊ ಬಡತನ ನೀಗಿಸುವಲ್ಲಿ ವಿಫಲವಾದುದನ್ನು ವಿದ್ವಾಂಸರು ಮತ್ತು ಇತಿಹಾಸಜ್ಞರು ಈಗ ಒಪ್ಪಿದ್ದಾರೆ – ಆರ್ಥಿಕ ಅಭಿವೃದ್ಧಿಗಾಗಿ ಬಿಡುಗಡೆಯಾದ ಒಟ್ಟು ಮೊತ್ತದಲ್ಲಿ 4% ಮಾತ್ರ ಮೂರು ಪ್ರಮುಖ ಬಡತನ ನಿರ್ಮೂಲನಾ ಕಾರ್ಯಕ್ರಮಕ್ಕೆ ಮೀಸಲಾಯಿತು. ವಿನಿಯೋಗವಾದ ಇದರಲ್ಲಿ ‘ಕಡುಬಡವರಿಗೆ’ ತಲಪಿದ್ದು ಅತ್ಯಲ್ಪ. ಗಾಂಧಿ ಮರು-ಚುನಾವಣೆಗೆ ಜನರ ಬೆಂಬಲವನ್ನು ಹುಟ್ಟುಹಾಕಲು ಪ್ರಮುಖವಾಗಿ ಬಳಸಲ್ಪಟ್ಟ ಈ ಘೋಷಣೆಯು ಬರೀ ಪೊಳ್ಳಾಯಿತು.

ಬ್ಯಾಂಕುಗಳ ರಾಷ್ಟ್ರೀಕರಣ ಮತ್ತು ರಾಜಧನ ರದ್ದತಿ :

ಬಡವರ ಪರವಾದ ನೀತಿಗಳನ್ನು ಅನುಸರಿಸಿ, ಅವರು 1969 ರಲ್ಲಿ 14 ವಾಣಿಜ್ಯ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿದರು ಮತ್ತು ಹಿಂದಿನ ರಾಜರ “ಖಾಸಗಿ ಕೊಡಿಗೆ ಹಣದ” ಅನುದಾನವನ್ನು (privy purses) ರದ್ದುಗೊಳಿಸಿದರು. ಈ ಪ್ರಕ್ರಿಯೆಯಲ್ಲಿ, ಅಸ್ತಿತ್ವದಲ್ಲಿದ್ದ ಹಿರಿಯ ಕಾಂಗ್ರಸ್ಸಿನ ನಾಯಕರ ಶ್ರೀಮಂತ ಪರವಾದ ನಿಲುವು, ಮತ್ತು ಅವರ ಅಸಮರ್ಥತೆ ಅವರ ವೃದ್ಧಾಪ್ಯದ ಕಾರಣದಿಂದಾಗಿ ಅವರು ಸೂಚಿಸಿದ ಆಮೂಲಾಗ್ರ ನಡೆಯನ್ನು ಮೊದಲೇ ನಿರ್ಲಕ್ಷಿಸಿದರು. ಸ್ವಲ್ಪ ಸಮಯದ ನಂತರ ಪಕ್ಷ ವಿಭಜನೆಯಾಯಿತು, ಮತ್ತು ಶ್ರೀಮತಿ ಗಾಂಧಿ ಅವರು ಪಕ್ಷದ ಪ್ರಬಲ ವಿಭಾಗದ ನಿರ್ವಿವಾದ ನಾಯಕರಾದರು. ಪುನರಾವಲೋಕನದಲ್ಲಿ, ‘ಗರಿಬಿ ಹಟಾವೊ’ ವಾಕ್ಚಾತುರ್ಯವು ಆಡಂಬರವಿಲ್ಲದ ಮತ್ತು ಸರಳವಾದ ನಿತಿಯಾಗಿ ಕಂಡುಬಂದಿತು. ಆದರೆ ಭಾರತೀಯ ರಾಜಕೀಯದಲ್ಲಿ ಮೊದಲ ಬಾರಿಗೆ ಬಡವರ ಕಳವಳಗಳನ್ನು ನೇರವಾಗಿ ಪರಿಹರಿಸಲು ಪ್ರಯತ್ನಿಸಲಾಗಿತ್ತು, ಇದು ಅವರ ಅಧಿಕಾರದ ಬಲವರ್ಧನೆಗೆ ಕಾರಣವಾಯಿತು.

ಭ್ರಷ್ಟಾಚಾರದ ಆರೋಪ ಮತ್ತು ಚುನಾವಣಾ ದುರಾಚಾರ :

ಲೋಕಸಭೆಗೆ ಚುನಾಯಿತರಾಗಿದ್ದ ಇಂದಿರಾ ಗಾಂಧಿ ಆಯ್ಕೆಯನ್ನು ಚುನಾವಣಾ ದುರಾಚಾರದ ಹಿನ್ನೆಲೆಯಲ್ಲಿ ಅನೂರ್ಜಿತ ಎಂದು ಅಲಹಾಬಾದ್‌ ಉಚ್ಚ ನ್ಯಾಯಾಲಯ 1975ರ ಜೂನ್ 12ರಂದು ತೀರ್ಪು ನೀಡಿತು. ರಾಜ್ ನಾರಾಯಣ್‌ ಸಲ್ಲಿಸಿದ ಚುನಾವಣಾ ತಕರಾರು ಅರ್ಜಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಗಾಂಧಿ ಸರಕಾರೀ ಯಂತ್ರವನ್ನೂ ಹಾಗೂ ಸಂಪನ್ಮೂಲಗಳನ್ನೂ ಹೇಗೆ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬುದನ್ನು ವಿವರವಾಗಿ ಎತ್ತಿ ತೋರಿಸಿದ್ದರು.(1971ರ ಚುನಾವಣೆಯಲ್ಲಿ ರಾಜ್ ನಾರಾಯಣ್‌ ವಿರುದ್ಧ ದುರಾಚಾರದಲ್ಲಿ ತೊಡಗಿದ್ದು ಸಾಬೀತಾಗಿ ಗಾಂಧಿ ಅಪರಾಧಿ ಎಂದು ತೀರ್ಮಾನವಾದ ನಂತರ, 1977ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ರಾಯ್ ಬರೈಲಿ ಕ್ಷೇತ್ರದಿಂದ ಅವರು ಮತ್ತೆ ಗಾಂಧಿಯನ್ನು ಸೋಲಿಸಿದರು). ಸಂಸತ್ತಿನ ಸದಸ್ಯೆಯ ಸ್ಥಾನದ ಅವರ ಅಧಿಕಾರವನ್ನು ಮೊಟಕುಗೊಳಿಸಿ ತೆಗೆದುಹಾಕುವಂತೆ ನ್ಯಾಯಾಲಯವು ಆದೇಶ ನೀಡಿತು. ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಫರ್ಧಿಸದಂತೆ ಅವರ ಮೇಲೆ ನಿಷೇಧ ಹೇರಿತು. ಪ್ರಧಾನ ಮಂತ್ರಿಯು ಲೋಕಸಭೆ (ಭಾರತದ ಸಂಸತ್ತಿನ ಕೆಳಮನೆ) ಅಥವಾ ರಾಜ್ಯ ಸಭೆ (ಸಂಸತ್ತಿನ ಮೇಲ್ಮನೆ)ಯ ಸದಸ್ಯರಾಗಿರಬೇಕಾದ್ದು ಕಡ್ಡಾಯ. ಹೀಗಾಗಿ, ಈ ತೀರ್ಪು ಗಾಂಧಿ ಅಧಿಕಾರದಿಂದ ಸಂಪೂರ್ಣವಾಗಿ ಕೆಳಗಿಳಿಯುವಂತೆ ಮಾಡಿತು.
ಆದರೆ ಗಾಂಧಿಯವರು ರಾಜಿನಾಮೆ ನೀಡುವಂತೆ ಮಾಡಿದ ಒತ್ತಾಯಗಳನ್ನು ತಳ್ಳಿಹಾಕಿದರು ಮತ್ತು ಸರ್ವೋಚ್ಚ ನ್ಯಾಯಾಲಕ್ಕೆ ಮೇಲ್ಮನವಿ ಸಲ್ಲಿಸುವ ತಮ್ಮ ಯೋಜನೆಯನ್ನು ಪ್ರಕಟಿಸಿದರು. ಅಲಹಾಬಾದ್ ಉಚ್ಚ ನ್ಯಾಯಾಲಯದಲ್ಲಿ ತೀರ್ಪಿತ್ತವರು ನ್ಯಾಯಮೂರ್ತಿ ಮಿಸ್ಟರ್ ಸಿನ್ಹ. ರಾಜ್ ನಾರಾಯಣರು ಮೊಕದ್ದಮೆ ದಾಖಲಿಸಿದ ಸುಮಾರು ನಾಲ್ಕು ವರ್ಷಗಳ ನಂತರ ತೀರ್ಪು ಹೊರಬಂತು. ಪ್ರಧಾನಿ ಇಂದಿರಾ 1971ರ ಸಂಸತ್ ಚುನಾವಣೆಯಲ್ಲಿ ಎದುರಾಳಿಯನ್ನು ಸೋಲಿಸಿದ್ದರು. ವಿಚಾರಣೆಯ ಸಂದರ್ಭದಲ್ಲಿ ರಕ್ಷಣೆಗಾಗಿ ಸಾಕ್ಷಿಯನ್ನು ನೀಡಿದ ಗಾಂಧಿಯವರನ್ನು, ಅಪ್ರಾಮಾಣಿಕ ಚುನಾವಣಾ ತಂತ್ರದಲ್ಲಿ ತೊಡಗಿದ್ದಕ್ಕಾಗಿ, ಪಕ್ಷದ ಉದ್ಧೇಶಕ್ಕಾಗಿ ಸರಕಾರೀ ಯಂತ್ರ ಮತ್ತು ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕಾಗಿ ತಪ್ಪಿತಸ್ಱರೆಂದು ತೀರ್ಮಾನಿಸಲಾಯಿತು. ಇಂದಿರಾ ವಿರುದ್ಧ ಮಾಡಲಾದ ಲಂಚಗಾರಿಕೆಯ ಗುರುತರ ಆರೋಪಗಳನ್ನು ನ್ಯಾಯಾಧೀಶರು ತಳ್ಳಿಹಾಕಿದರು.
1975ರ ಆಗಸ್ಟ್‌ನಲ್ಲಿ ಲೋಕಸಭೆಯು ಅವರನ್ನು ಅಪರಾಧ ಮುಕ್ತಗೊಳಿಸಲು ಪೂರ್ವಾನ್ವಯವಾಗುವಂಥ ಶಾಸನವೊಂದನ್ನು ರಚಿಸಿತು. ಆ ಶಾಸನದಂತೆ ಸರ್ಕಾರಿ ಅಧಿಕಾರಿಯು ಅಭ್ಯರ್ಥಿಯ ಅನುಮತಿ ಅಥವಾ ಆಜ್ಞೆ ಪಡೆದು ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಯಾ ಕಾರ್ಯದಲ್ಲಿ ತೊಡಗಿದ್ದರೆ ಮಾತ್ರಾ ಅದು ಅಪರಾಧವೆಂದು ಪರಿಗಣಿಸಬೇಕೆಂದು ತೀರ್ಮಾನಿಸಿತ್ತು. ಕಾರಣ ಒಬ್ಬ ಸರ್ಕಾರಿ ನೌಕರ (ಯಶಪಾಲ್ ಕಪೂರ್) ಸ್ವಯಂ ಪ್ರೇರಿತವಾಗಿ ತನ್ನ ಕೆಲಸಕ್ಕೆ ರಾಜಿನಾಮೆ ಸಲ್ಲಿಸಿ ಇಂದಿರಾ ಅವರ ಚುನಾವಣಾ ವೇದಿಕೆಯ ರಚನೆಯ ಮತ್ತು ಏಜೆಂಟರಾಗಿ ಕೆಲಸ ಮಾಡಿದ್ದರು. ಅವರ ರಾಜಿನಾಮೆಯನ್ನು ಮೇಲಧಿಕಾರಿ ಅಂಗೀಕಾರ ಮಾಡಿರಲಿಲ್ಲ. ಆದ್ದರಿಂದ ಆದ್ದರಿಂದ ಸರ್ಕಾರಿಯಂತ್ರ ದುರುಪಯೋಗವಾಗಿದೆ ಎಂದು ನ್ಯಾಯಾಲಯ ತೀರ್ಮಾನಿಸಿತ್ತು.

ಪ್ರತಿಭಟನೆ ಮತ್ತು ಅಸಹಕಾರ ಆಂದೋಲನ

ಇಂದಿರಾ ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಿ “ನನ್ನ ಕೊನೆಯ ಉಸಿರಿರುವವರೆಗೆ” ನಾನು ಜನಸೇವೆಯಲ್ಲಿ ತೊಡಗಿರುತ್ತೇನೆ” ಎಂದು ಘೋಷಿಸಿದರು. ಈ ಸಂದರ್ಭವನ್ನೇ ರಾಜಕೀಯ ಬಂಡವಾಳ ಮಾಡಿಕೊಂಡ ಪ್ರತಿ ಪಕ್ಷಗಳು ಮತ್ತು ಅವರ ಬೆಂಬಲಿಗರು ಒಟ್ಟಾಗಿ ಈ ಘೋಷಣೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ಅವರ ರಾಜೀನಾಮೆಗೆ ಆಗ್ರಹಿಸಿದವು. ಈ ಪ್ರತಿಭಟನೆಯಲ್ಲಿ ಬೇರೆಬೇರೆ ಸಂಘ ಸಂಸ್ಥೆಗಳು ಪಾಲ್ಗೊಂಡ ಕಾರಣ ಅನೇಕ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು. ನಿರಾಯುಧ ಜನಜಂಗುಳಿಯ ಮೇಲೆ ಗುಂಡುಹಾರಿಸುವ ಆದೇಶಗಳನ್ನು ಧಿಕ್ಕರಿಸುವಂತೆ J.P. ನಾರಾಯಣ್ ಪೋಲೀಸರಿಗೆ ಕರೆ ನೀಡಿದ್ದರಿಂದ ಆಂದೋಲನ ಮತ್ತಷ್ಟು ಬಲಯುತವಾಯಿತು. ಗಾಂಧಿ ಸರಕಾರದೊಂದಿಗೆ ಸಾರ್ವಜನಿಕರ ಭ್ರಮನಿರಸನದ ಜೊತೆ ಆರ್ಥಿಕ ಬಿಕ್ಕಟ್ಟು ಉಲ್ಬಣಗೊಂಡು ಸಂಸತ್‌ ಭವನ ಮತ್ತು ದೆಹಲಿಯ ಅವರ ಮನೆಯ ಸುತ್ತ ಜನ ಜಮಾಯಿಸಿ ಪ್ರತಿಭಟಿಸಿದರು ಮತ್ತು ರಾಜೀನಾಮೆಗಾಗಿ ಒತ್ತಾಯಿಸಿದರು.

ಬಿಹಾರ್‌ನಲ್ಲಿ ನಡೆದ ದಂಗೆಯ ಬಗೆಗಿನ ಆನಂದ್ ಪತ್ವರ್ಧನ್‌ರವರ ಮೊದಲ ದಾಖಲೆ ಕ್ರಾಂತಿಯ ಅಲೆಗಳು ಚಿತ್ರವು ಭಾರತಾದ್ಯಂತ ರಹಸ್ಯವಾಗಿ ಹಂಚಲ್ಪಟ್ಟಿತು ಮತ್ತು ಅದನ್ನು ವಿದೇಶ ಜಾಗೃತಿ ಮೂಡಿಸಲು ವಿಭಾಗದಲ್ಲಿ ಗುಟ್ಟಾಗಿಡಲಾಯಿತು.
ಈ ಹೊತ್ತಿಗಾಗಲೇ ಇಂದಿರಾ ನಿರಂಕುಶಾಧಿಕಾರಿ ಧೋರಣೆಯ ಆಪಾದನೆಗೊಳಗಾಗಿದ್ದರು.ಸಂಸತ್ತಿನಲ್ಲಿ ಅವರಿಗಿದ್ದ ಭಾರೀ ಬಹುಮತವನ್ನು ಬಳಸಿಕೊಂಡು, ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ತಿದ್ದುಪಡಿ ಮಾಡಿತು. ಕೇಂದ್ರ ಮತ್ತು ರಾಜ್ಯಗಳ ನಡುವಿನ ಅಧಿಕಾರ ಸಮತೋಲನವನ್ನು ಮಾರ್ಪಡಿಸಿದ ತಿದ್ದುಪಡಿಯಲ್ಲಿ ಕೇಂದ್ರ ಸರಕಾರದ ಕೈಗೆ ಅಧಿಕ ಅಧಿಕಾರ ಇರುವಂತೆ ನೋಡಿಕೊಂಡಿತು. ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿದ್ದ ರಾಜ್ಯಗಳನ್ನು ಸಂವಿಧಾನದ 356ನೇ ನಿಬಂಧನೆಯನ್ನು ಬಳಸಿ ಅವರು ಎರಡು ಬಾರಿ, “ರಾಷ್ಟ್ರಪತಿ ಆಡಳಿತ”ವನ್ನು ಹೇರಿದರು ಮತ್ತು ನಿಯಂತ್ರಣವೆಲ್ಲವನ್ನೂ ತಮ್ಮ ವಶದಲ್ಲಿ ಇಟ್ಟುಕೊಂಡರು. ಈ ರಾಜ್ಯಗಳಲ್ಲಿ “ಕಾನೂನು ಕುಸಿದು ಬಿದ್ದಿದೆ ಮತ್ತು ಅರಾಜಕತೆ ತಾಂಡವವಾಡುತ್ತಿದೆ” ಎಂಬ ಸಬೂಬು ನೀಡಿದರು. ಗಾಂಧಿ ಅಧಿಕಾರಕ್ಕೆ ಏರಲು ಕಾರಣ ಕರ್ತರಾಗಿದ್ದ ಅವರ ನಿಕಟ ರಾಜಕೀಯ ಸಲಹೆಗಾರ P. N. ಹಕ್ಸರ್ ಅವರಂಥ ಕೆಲವರನ್ನು ದೂರ ತಳ್ಳಿ ಇಂದಿರಾರ ರಾಜಕೀಯ ಸಲಹೆಗಾರರಾಗಿ ಬೆಳೆದ ಸಂಜಯ್ ಗಾಂಧಿಯ ಉಸ್ತುವಾರಿಕೆ ಚುನಾಯಿತ ಅಧಿಕಾರಿಗಳ ಮತ್ತು ಆಡಳಿತಾತ್ಮಕ ಸೇವಾ ವಿಭಾಗದ ಅಸಮಾಧಾನಕ್ಕೆ ಕಾರಣವಾಯಿತು. ಸರ್ವಾಧಿಕಾರೀ ಆಡಳಿತದ ಬಯಕೆಯ ಅವರ ಹೊಸ ಪ್ರವೃತ್ತಿಗೆ ಪ್ರತ್ಯುತ್ತರವಾಗಿ, ಜಯ ಪ್ರಕಾಶ್ ನಾರಾಯಣ್, ಸತ್ಯೇಂದ್ರ ನಾರಾಯಣ್ ಸಿನ್ಹ ಮತ್ತು ಆಚಾರ್ಯ ಜೀವತ್ರಾಮ್ ಕೃಪಾಲನಿಯಂತಹ ಮೇಧಾವಿಗಳು ಮತ್ತು ಸ್ವಾತಂತ್ರ್ಯ-ಹೋರಾಟಗಾರರು ಗಾಂಧಿಯವರ ವಿರುದ್ಧ ಮತ್ತು ಅವರ ಸರಕಾರದ ವಿರುದ್ಧ ಟೀಕಾ ಪ್ರಹಾರದ ಭಾಷಣ ಮಾಡುತ್ತಾ ಭಾರತಾದ್ಯಂತ ಸಂಚರಿಸಿದರು.

ತುರ್ತು ಪರಿಸ್ಥಿತಿ (1975-1977) :

ಇಂದಿರಾ ಗಾಂಧಿಯವರ ಶತಮಾನೋತ್ಸವ ಆಚರಿಸುವುದು ಹುತಾತ್ಮರಿಗೆ ಮಾಡಿದ ಅವಮಾನ ಎಂಬರ್ಥದಲ್ಲಿ ಪ್ರೊ. ಎಲ್‌.ಎಸ್‌.ಶೇಷಗಿರಿರಾವ್ ಅವರು ಬರೆದಿರುವ ಪತ್ರ (ವಾ., ನ.29) ಪೂರ್ವಗ್ರಹಪೀಡಿತವಾದುದು. ಇಂದಿರಾ ಗಾಂಧಿ ಅವರನ್ನು ‘ಇಸ್ರೇಲ್‌ನ ಗೋಲ್ಡಾ ಮೈರ್ ನಂತರದ ವಿಶ್ವದ ಎರಡನೇ ಉಕ್ಕಿನ ಮಹಿಳೆ’ ಎಂದು ಇಡೀ ವಿಶ್ವ ಹಾಡಿ ಹೊಗಳಿರುವಾಗ, ತುರ್ತುಪರಿಸ್ಥಿತಿಯ ಹಿನ್ನೆಲೆಯಲ್ಲಿ ಅವರನ್ನು ಖಳನಾಯಕಿಯಂತೆ ವರ್ಣಿಸುವುದು ಒಂದು ವ್ಯವಸ್ಥಿತ ಪಿತೂರಿ.
ಇಂದಿರಾ ಗಾಂಧಿ ದೇಶದ ಮೇಲೆ ತುರ್ತುಪರಿಸ್ಥಿತಿ ಹೇರಿದ್ದು ನಿಜ. ಜಯಪ್ರಕಾಶ ನಾರಾಯಣರ ನೇತೃತ್ವದಲ್ಲಿ ವಿರೋಧ ಪಕ್ಷಗಳು, ತಮ್ಮ ಜವಾಬ್ದಾರಿಯನ್ನು ಬದಿಗಿಟ್ಟು ದೇಶದ ವಿರುದ್ಧ “ದಂಗೆ ಏಳುವಂತೆ” ಪೊಲೀಸರು ಮತ್ತು ಸೈನಿಕರಿಗೆ ಕರೆ ಕೊಟ್ಟಿದ್ದುದು ಇದಕ್ಕೆ ಕಾರಣ. ನಂತರ ನಡೆದ ಚುನಾವಣೆಯಲ್ಲಿ, ತುರ್ತುಪರಿಸ್ಥಿತಿ ಹೇರಿಕೆಗಾಗಿ ಜನ ತಮ್ಮನ್ನು ಸೋಲಿಸಿದಾಗ ಇಂದಿರಾ ಅವರಿಗೆ ಪ್ರಾಯಶ್ಚಿತ್ತವಾಗಿತ್ತು. ಒಂದು ತಪ್ಪಿಗೆ ಒಂದೇ ಸಲ ಶಿಕ್ಷೆ ಎಂದು ಕಾನೂನು ಹೇಳುತ್ತದೆ. ಆದಕಾರಣ ಅವರನ್ನು ಪದೇಪದೇ ಶಿಕ್ಷಿಸುವುದು ಮಹಾ ಅಪರಾಧ. ಸೋಲಿನ ನಂತರ ನಡೆದ ಚುನಾವಣೆಯಲ್ಲಿ ಭಾರತದ ಮತದಾರರು ಇಂದಿರಾ ಅವರು ಮತ್ತೆ ಆಡಳಿತ ನಡೆಸಲು ಅವಕಾಶ ನೀಡಿದ್ದು ಪ್ರಜಾಪ್ರಭುತ್ವದ ಒಂದು ಅಪೂರ್ವ ವಿಜಯ.
ದೇಶದ ಒಗ್ಗಟ್ಟು ಕಾಪಾಡುವಲ್ಲಿ, ಕಾಶ್ಮೀರ, ಅಸ್ಸಾಂ, ಮಣಿಪುರ, ನಾಗಾಲ್ಯಾಂಡ್‌ನಲ್ಲಿ ಶಾಂತಿ ಕಾಪಾಡುವಲ್ಲಿ, ಸಿಕ್ಕಿಂ ಪ್ರದೇಶವನ್ನು ಭಾರತಕ್ಕೆ ಸೇರಿಸಿಕೊಳ್ಳುವಲ್ಲಿ ಇಂದಿರಾ ಅವರ ಆಡಳಿತ ಶಿಖರ ಪ್ರಾಯದಂತೆ ಕೆಲಸ ಮಾಡಿತ್ತು. ಇಂತಹ ಶ್ರೇಷ್ಠ ಮಹಿಳೆಯ ಕೊಡುಗೆಗಳನ್ನು ಗುರುತಿಸುವ ಬದಲಾಗಿ ಅವರನ್ನು ಹೀಗಳೆಯುವುದು ಸರಿಯಲ್ಲ.
ಚಿಂತಕ ಮತ್ತು ವಿಚಾರವಾದಿ:-ಕೆ.ಎನ್‌.ಭಗವಾನ್, ಬೆಂಗಳೂರು.
ಆಂದೋಲನದಲ್ಲಿ ಭಾಗವಹಿಸಿದ ಎದುರಾಳಿಗಳನ್ನು ಬಂಧಿಸುವಂತೆ ಗಾಂಧಿ ಆದೇಶ ನೀಡುವ ಮೂಲಕ ಸಹಜ ವಾತಾವರಣ ಪುನಃಸ್ಥಾಪಿಸಲು ಮುಂದಾದರು. ಅಲಹಾಬಾದ್ ಉಚ್ಚ ನ್ಯಾಯಾಲಯದ ತೀರ್ಪು ಹೊರಬಿದ್ದ ನಂತರ ಕಾನೂನು ಕುಸಿತ ಮತ್ತು ಅವ್ಯವಸ್ಥೆ ಭುಗಿಲೆದ್ದಿದ್ದನ್ನು ಗಮನಿಸಿದ ಅವರ ಸಚಿವ ಸಂಪುಟ ಮತ್ತು ಸರಕಾರವು ತುರ್ತು ಪರಿಸ್ಥಿತಿ ಘೋಷಿಸುವಂತೆ ರಾಷ್ಟಾಧ್ಯಕ್ಷ ಫಕ್ರುದ್ದೀನ್ ಆಲಿ ಅಹಮದ್‌ ಅವರಿಗೆ ಶಿಫಾರಸು ಮಾಡಿತು.ತತ್ಪರಿಣಾಮವಾಗಿ, ಅಹಮದ್‌ರವರು ಆಂತರಿಕ ಅವ್ಯವಸ್ಥತೆಯ ಕಾರಣ ಒಡ್ಡಿ ಸಂವಿಧಾನದ 352ರ ನಿಬಂದನೆಗೆ ಅನುಗುಣವಾಗಿ 1975ರ ಜೂನ್ 26ರಂದು ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿ ಹೇರಿದರು.

ಶಾಸನ ಬದ್ಧ ಆಡಳಿತ :

ಕೆಲವೇ ತಿಂಗಳುಗಳಲ್ಲಿ, ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿದ್ದ ಗುಜರಾತ್ ಮತ್ತು ತಮಿಳುನಾಡು ಎರಡು ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತವನ್ನು ಘೋಷಿಸಲಾಯಿತು ಈ ಮೂಲಕ ಇಡೀ ರಾಷ್ಟ್ರವನ್ನು ನೇರ ಕೇಂದ್ರ ಆಡಳಿತದ ಹಿಡಿತಕ್ಕೆ ತರಲಾಯಿತು. ಕರ್ಫ್ಯೂ ವಿಧಿಸಲು ಮತ್ತು ನಾಗರಿಕರನ್ನು ಅನಿರ್ದಿಷ್ಟವಾಗಿ ಬಂಧನದಲ್ಲಿಡಲು ಪೊಲೀಸರಿಗೆ ಅಧಿಕಾರ ನೀಡಲಾಯಿತು. ವಾರ್ತಾ ಮತ್ತು ಪ್ರಸಾರ ಖಾತೆ ಮಂತ್ರಾಲಯ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಕಡಿವಾಣ ಹಾಕಿತು. ತಮ್ಮ ಕೆಲಸಕಾರ್ಯಗಳಲ್ಲಿ ಸಂಜಯ್ ಗಾಂಧಿಯವರ ಹಸ್ತಕ್ಷೇಪವನ್ನು ಸಹಿಸಲಾಗದೇ ಪ್ರತಿಭಟಿಸಿ, ಭವಿಷ್ಯದ ಪ್ರಧಾನ ಮಂತ್ರಿ ಎಂದು ಬಿಂಬಿತರಾಗಿದ್ದ ಇಂದರ್ ಕುಮಾರ್ ಗುಜ್ರಾಲ್‌ ವಾರ್ತಾ ಮತ್ತು ಪ್ರಸಾರ ಖಾತೆ ಮಂತ್ರಿ ಪದವಿಗೆ ರಾಜಿನಾಮೆ ನೀಡಿ ಹೊರಬಂದರು. ಅಂತಿಮವಾಗಿ, ರಾಜ್ಯ ರಾಜಪಾಲರ ಶಿಫಾರಸಿನ ಮೇರೆಗೆ ರಾಜ್ಯ ಸರಕಾರವನ್ನು ವಜಾಗೊಳಿಸಲು ಅನುಮತಿಸುವ ಸಂವಿಧನಾತ್ಮಕ ನಿಬಂಧನೆಯ ಪ್ರಕಾರ ವಿರೋಧಪಕ್ಷ ಆಡಳಿತ ನಡೆಸುತ್ತಿದ್ದ ರಾಜ್ಯ ಸರಕಾರಗಳನ್ನು ತೆಗೆದುಹಾಕುವುದರೊಂದಿಗೆ, ಸನಿಹದಲ್ಲೇ ಜರುಗಬೇಕಿದ್ದ ವಿಧಾನ ಸಭಾ ಚುನಾವಣೆಗಳನ್ನು ಅನಿರ್ದಿಷ್ಟಾವಧಿ ಮುಂದೂಡಲಾಯಿತು. ಸ್ವತಃ ತಮಗೆ ವಿಶೇಷ ಅಧಿಕಾರಗಳನ್ನು ನೀಡುವಂತೆ ತುರ್ತುಪರಿಸ್ಥಿತಿ ನಿಯಮಾವಳಿಯನ್ನು ಇಂದಿರಾ ಪರಿವರ್ತಿಸಿದರು.

“ಶಾಸಕಾಂಗ ಪಕ್ಷಗಳ ಅಧೀನದಲ್ಲಿ ಬಲಿಷ್ಠರಾದ ಹಾಗೂ ಪ್ರಾದೇಶಿಕ ಪಕ್ಷಗಳ ಮುಖ್ಯ ಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲು ಮತ್ತು ಆದ್ಯತೆ ನೀಡುತ್ತಿದ್ದ ಅವರ ತಂದೆಯವರ (ನೆಹರು) ಮಾರ್ಗಕ್ಕಿಂತ ಭಿನ್ನವಾಗಿ ವರ್ತಿಸಿದರು. ಶ್ರೀಮತಿ ಇಂದಿರಾ ಸ್ವತಂತ್ರ ನೆಲೆಯನ್ನು ಹೊಂದಿದ್ದ ಪ್ರತೀ ಕಾಂಗ್ರೆಸ್ ಮುಖ್ಯ ಮಂತ್ರಿಗಳನ್ನು ತೆಗೆದುಹಾಕಲು ಮತ್ತು ಆ ಸ್ಥಾನಕ್ಕೆ ಅವರಿಗೆ ವೈಯಕ್ತಿಕ ನಿಷ್ಠೆ ತೋರುವ ಮಂತ್ರಿಗಳನ್ನು ನೇಮಿಸಲು ಮುಂದಾದರು…ಆದರೂ ಸಹ, ರಾಜ್ಯಗಳಲ್ಲಿ ಸ್ಥಿರತೆಯನ್ನು ಉಳಿಸಿಕೊಂಡು ಹೋಗಲಾಗಲಿಲ್ಲ”.

ಸಂಸತ್ತಿನಲ್ಲಿ ಚರ್ಚಿಸುವ ಅವಶ್ಯಕತೆಯೇ ಇಲ್ಲದಂತೆ ಶಾಸನಗಳನ್ನು ರೂಪಿಸುವ ಮತ್ತು ‘ತಾನು ಹೇಳಿದ್ದೇ ಕಾನೂನು’ ಮತ್ತು ಅದು ಕಾಯಿದೆ ಬದ್ಧ ಎಂಬಂಥ ಸುಗ್ರೀವಾಜ್ಞೆ ಹೊರಡಿಸುವಂತೆ ಅವರು ರಾಷ್ಟ್ರಪತಿ ಅಹಮದ್‌ ಅವರನ್ನು ಒತ್ತಾಯಿಸಿದರು ಎಂಬ ಆಪಾದನೆಯೂ ಅವರ ಮೇಲಿದೆ. ಅದೇ ಸಮಯದಲ್ಲಿ, ಗಾಂಧಿ ಸರಕಾರವು ಭಿನ್ನಾಭಿಪ್ರಾಯಕ್ಕೆ ಇತಿಶ್ರೀ ಹಾಡುವ ಉದ್ದೇಶದಿಂದ ಸಾವಿರಾರು ರಾಜಕೀಯ ಮುಖಂಡರನ್ನು ಬಂಧನಕ್ಕೆ ಈಡು ಮಾಡಿತು, ಮುಂದೊಮ್ಮೆ ದೆಹಲಿಯ Lt. ಗವರ್ನರ್‌ ಆದ, ಜಗ ಮೋಹನ್ರ, ಮೇಲ್ವಿಚಾರಣೆಯಲ್ಲಿ ದೆಹಲಿಯ ಜಮಾ ಮಸೀದಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ಸಂಜಯ್‌ ಆರಂಭಿಸಿದರು, ಇದರಿಂದ ಸಾವಿರಾರು ಜನ ಮನೆಮಠ ಕಳೆದುಕೊಂಡರು, ನೂರಾರು ಮಂದಿ ಸಾವನ್ನಪ್ಪಿದರು, ಮತ್ತು ರಾಷ್ಟ್ರದ ರಾಜಧಾನಿಯ ಆ ಪ್ರದೇಶದಲ್ಲಿ ಪ್ರಾಂತೀಯ ವೈಮನಸ್ಸು ಬೆಳೆಯಿತು-ಎಂದು ಆರೋಪಿಸಲಾಗಿದೆ. ಸಾವಿರಾರು ಮಂದಿಯ ಮೇಲೆ ಬಲವಂತವಾಗಿ ಕುಟುಂಬ ಯೋಜನೆಯನ್ನು ಅನುಷ್ಠಾನಗೊಳಿಸಿ ಸಂತಾನಹರಣಚಿಕಿತ್ಸಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬಹುತೇಕ ಸಂದರ್ಭಗಳಲ್ಲಿ ಚಿಕಿತ್ಸೆಯನ್ನು ಹೀನಾಯವಾಗಿ ನಿರ್ವಹಿಸಲಾಯಿತು.

ಚುನಾವಣೆಗಳು :

ತುರ್ತು ಪರಿಸ್ಥಿತಿಯನ್ನು ಎರಡು ಬಾರಿ ವಿಸ್ತರಿಸಿದ ಇಂದಿರಾ ಗಾಂಧಿ ತಮ್ಮ ಆಡಳಿತವನ್ನು ಸಮರ್ಥಿಸಲು ಮತದಾರರಿಗೆ ಒಂದು ಅವಕಾಶ ನೀಡುವುದಕ್ಕಾಗಿ 1977ರಲ್ಲಿ ಚುನಾವಣೆ ಘೋಷಿಸಿದರು. ಅತಿಯಾದ ನಿಯಂತ್ರಣಕ್ಕೆ ಒಳಪಟ್ಟ ಪತ್ರಿಕಾ ಲೇಖನಗಳನ್ನು ಓದಿದ ಇಂದಿರಾ ಇದು ತಮ್ಮ ಜನಪ್ರಿಯತೆಯ ಪರಾಕಾಷ್ಠೆ ಎಂದು ತಪ್ಪಾಗಿ ಗ್ರಹಿಸಿದರು. ಇವರ ಪ್ರತಿಯೊಂದು ಹೆಜ್ಜೆಯನ್ನೂ ಜನತಾ ಪಕ್ಷ ವಿರೋಧಿಸಿತು. ಜಯ ಪ್ರಕಾಶ್ ನಾರಾಯಣ್‌‌ರನ್ನು ತಮ್ಮ ಆಧ್ಯಾತ್ಮಿಕ ಮಾರ್ಗದರ್ಶಿಯಾಗಿ ಇಟ್ಟುಕೊಂಡು, ಇಂದಿರಾರ ದೀರ್ಘಕಾಲೀನ ದ್ವೇಷಿಯಾದ ದೇಸಾಯಿ ನೇತೃತ್ವದ ಜನತಾ ಪಕ್ಷವು “ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರ” ಎರಡರ ನಡುವಿನ ಆಯ್ಕೆಗೆ ಈ ಚುನಾವಣೆ ಕಟ್ಟ ಕಡೆಯ ಅವಕಾಶ ಎಂದು ಸಾರಿತು. ಇಂದಿರಾರ ಕಾಂಗ್ರೆಸ್ ಪಕ್ಷ ಭಾರೀ ಸೋಲುಂಡಿತು. ಇಂದಿರಾ ಮತ್ತು ಸಂಜಯ್ ಗಾಂಧಿ ಇಬ್ಬರೂ ಚುನಾವಣೆಯಲ್ಲಿ ಸೋತರು. ಕಾಂಗ್ರೆಸ್ 153 (ಹಿಂದಿನ ಲೋಕಸಭೆಗೆ 350ಕ್ಕೆ ಹೋಲಿಸಿದಾಗ) ಸ್ಥಾನಗಳಿಗೆ ಇಳಿಯಿತು. ಇದರಲ್ಲಿನ 92 ಸ್ಥಾನ ದಕ್ಷಿಣ ರಾಜ್ಯಗಳಿಗೆ ಸೇರಿದ್ದು.

ಇಂದಿರಾ ಗಾಂಧಿಯವರಿಗೆ ದೊರಕಿತ ಪ್ರಶಸ್ತಿಗಳು

ಶ್ರೀಮತಿ ಇಂದಿರಾ ಗಾಂಧಿ ಅವರ ಹಿರಿಮೆಯ ಕಿರೀಟಕ್ಕೆ ಹಲವಾರು ಸಾಧನೆಗಳ ಗರಿಗಳಿದ್ದವು. ಅವರು 1972ರ ಸಾಲಿನ ಭಾರತ ರತ್ನ ಪ್ರಶಸ್ತಿ ಪುರಸ್ಕøತೆ. ಬಾಂಗ್ಲಾದೇಶದ ವಿಮೋಚನೆಗಾಗಿ ಮೆಕ್ಸಿಕನ್ ಅಕಾಡೆಮಿ ಪ್ರಶಸ್ತಿ ಅದೇ ವರುಷ ಲಭ್ಯವಾಗಿತ್ತು. 1973ರಲ್ಲಿ ಎಫ್ಎಒನ ದ್ವಿತೀಯ ವಾರ್ಷಿಕ ಪದಕ, 1976ರರಲ್ಲಿ ನಗರಿ ಪ್ರಚಾರಿಣಿ ಸಭಾ ಕೊಡಮಾಡುವ ಸಾಹಿತ್ಯ ವಚಸ್ಪತಿ (ಹಿಂದಿ) ಪ್ರಶಸ್ತಿ, 1953ರಲ್ಲಿ ಅಮೆರಿಕಾದ ಮದರ್ಸ್ ಅವಾರ್ಡ್, ರಾಜನೀತಿಯಲ್ಲಿನ ಅತ್ಯುತ್ತಮ ಕಾರ್ಯಕ್ಕಾಗಿ ಇಟೆಲಿಯ ಐಸ್ಲೆಬೆಲ್ಲಾ ಡಿ ಎಸ್ಟೆ ಪ್ರಶಸ್ತಿ, ಯಾಲೆ ವಿಶ್ವವಿದ್ಯಾಲಯದ ಹೌಲ್ಯಾಂಡ್ ಮೆಮೋರಿಯಲ್ ಪ್ರಶಸ್ತಿ ಲಭಿಸಿದವು. ಫ್ರೆಂಚ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಒಪೀನಿಯನ್ ಕೈಗೊಂಡ ಸಮೀಕ್ಷೆಗಳ ಪ್ರಕಾರ ಅವರು 1967 ಮತ್ತು 1968 ಎರಡು ವರುಷಗಳಲ್ಲಿ ನಿರಂತರವಾಗಿ ಶ್ರೀಮತಿ ಇಂದಿರಾ ಗಾಂಧಿ ಫ್ರೆಂಚರ ಅತ್ಯಂತ ಮೆಚ್ಚುಗೆಗೆ ಪಾತ್ರವಾದ ಮಹಿಳೆ ಎಂಬ ವಿಷಯವನ್ನು ತಿಳಿಸಿತು. 1971ರಲ್ಲಿ ಅಮೆರಿಕಾದಲ್ಲಿ ನಡೆದ ವಿಶೆಷ ಗ್ಯಾಲಪ್ ಸಮೀಕ್ಷೆ ಪ್ರಕಾರ ಅವರು ಪ್ರಪಂಚದಲ್ಲೇ ಅತ್ಯಂತ ಮೆಚ್ಚುಗೆಗೆ ಪಾತ್ರವಾದ ವ್ಯಕ್ತಿ. ಪ್ರಾಣಿಗಳ ರಕ್ಷಣೆಗಾಗಿ 1971ರಲ್ಲಿ ಅಂರ್ಜೆಟಿನಾ ಸೊಸೈಟಿ ಅವರಿಗೆ ಗೌರವ ಡಿಪ್ಲೊಮಾ ಪ್ರದಾನ ಮಾಡಿತು.

ದಿ ಯಿಯರ್ ಆಫ್ ಚಾಲೆಂಜ್ ( 1966-69), ದಿ ಯಿಯರ್ಸ್ ಆಫ್ ಎಂಡೆವಿಯರ್ ( 1069-72) ಇಂಡಿಯಾ (ಲಂಡನ್) (1095), ‘ಇಂಡೆ ( ಲಾವುಸಾನೆ) (1979) ಮತ್ತಿತರ ಭಾಷಣ ಮತ್ತು ಬರಹಗಳ ಸಂಗ್ರಹ ಅವರ ಪ್ರಸಿದ್ಧ ಪ್ರಕಟಣೆಯನ್ನು ಸೇರಿವೆ. ಶ್ರೀಮತಿ ಗಾಂಧಿ ಅವರು ಭಾರತ ಮತ್ತು ಪ್ರಪಂಚದೆಲ್ಲೆಡೆ ಸಾಕಷ್ಟು ಪ್ರಯಾಣ ಕೈಗೊಂಡವರು. ಅಫ್ಘಾನಿಸ್ಥಾನ, ಬಾಂಗ್ಲಾದೇಶ, ನೇಪಾಳ, ಭೂತಾನ್, ಚೀನಾ, ಶ್ರೀಲಂಕಾ ಮತ್ತು ಬರ್ಮಾಗಳಂತಹ ನೆರೆ ರಾಜ್ಯಗಳಿಗೂ ಅವರು ಭೇಟಿ ನೀಡಿದ್ದರು. ಫ್ರಾನ್ಸ್, ಜರ್ಮನ್ ಪ್ರಜಾಪ್ರಭುತ್ವ ಗಣರಾಜ್ಯ, ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿ, ಗಯಾನಾ, ಹಂಗೇರಿ, ಇರಾನ್, ಇರಾಕ್ ಮತ್ತು ಇಟೆಲಿ ರಾಷ್ಟ್ರಗಳಿಗೆ ಅಧಿಕೃತ ಭೇಟಿ ನೀಡಿದರು. ಅಲ್ಜಿರಿಯಾ, ಅರ್ಜೆಂಟಿನಾ, ಆಸ್ಟ್ರೆಲಿಯಾ, ಆಸ್ಟ್ರಿಯಾ, ಬೆಲ್ಜಿಯಮ್, ಬ್ರೆಜಿಲ್, ಬಲ್ಗೆರಿಯಾ, ಕೆನಡಾ, ಚಿಲಿ, ಜೆಕೊಸ್ಲಾವೆಕಿಯಾ, ಬೊಲಿವಿಯಾ ಮತ್ತು ಈಜಿಪ್ಟ್ಗಳಂತಹ ಅತ್ಯಧಿಕ ರಾಷ್ಟ್ರಗಳಿಗೆ ಭೇಟಿ ಮಾಡಿದವರಲ್ಲಿ ಶ್ರೀಮತಿ ಇಂದಿರಾ ಗಾಂಧಿ ಒಬ್ಬರು. ಇಂಡೊನೇಶ್ಯಾ, ಜಪಾನ್, ಜಮೈಕಾ, ಕೆನ್ಯಾ, ಮಲೆಷ್ಯಾ, ಮಾರಿಷಸ್, ಮೆಕ್ಸಿಕೊ, ನೆದರ್ಲ್ಯಾಂಡ್, ನ್ಯೂಜಿಲ್ಯಾಂಡ್ ನೈಜಿರಿಯಾ, ಒಮನ್, ಪೋಲ್ಯಾಂಡ್, ರುಮಾನಿಯಾ, ಸಿಂಗಾಪುರ್, ಸ್ವಿಟ್ಜರ್ಲ್ಯಾಂಡ್, ಸಿರಿಯಾ, ಸ್ವಿಡನ್, ತಾಂಜೆನಿಯಾ, ಥಯ್ಲ್ಯಾಂಡ್, ಟ್ರಿನಿಡಾಡ್ ಮತ್ತು ಟೊಬಾಗೋಗಳಂತಹ ಅಮೆರಿಕನ್, ಯುರೋಪಿಯನ್ ಮತ್ತು ಏಷ್ಯಾ ರಾಷ್ಟ್ರಗಳಿಗೆ ಇವರು ಭೇಟಿ ನೀಡಿದರು. ವಿಶ್ವ ಸಂಸ್ಥೆಯ ಮುಖ್ಯ ಕಛೇರಿಗೂ ಅವರು ಭೇಟಿ ನೀಡಿದರು.

ಮೂರನೇ ಅವಧಿ

ರೂಪಾಯಿ ಅಪಮೌಲ್ಯದ ಬಿಕ್ಕಟ್ಟು :

1980ರ ಆರಂಭದಲ್ಲಿ, US ಡಾಲರ್‌ ಎದುರು ರೂಪಾಯಿ ಮೌಲ್ಯ 40% ಕುಸಿದು, ಒಂದು ಡಾಲರ್‌ಗಿದ್ದ 7ರೂ. 12ಕ್ಕೆ ಜಿಗಿಯಿತು. ಕುಸಿತವನ್ನು ತಡೆಯಲು ಇಂದಿರಾ ಆಡಳಿತವು ವಿಫಲವಾಯಿತು.

ಆಪರೇಶನ್ ಬ್ಲೂ ಸ್ಟಾರ್ ಮತ್ತು ಹತ್ಯೆ :

ಗಾಂಧಿಯವರ ಮುಂದಿನ ವರ್ಷಗಳು ಪಂಜಾಬ್‌ನ ಸಮಸ್ಯೆಗಳೊಂದಿಗೆ ನಾಶವಾದವು. 1984ರ ಜೂನ್‍‌ನಲ್ಲಿ, ಜರ್ನೈಲ್ ಸಿಂಗ್ ಭಿಂದ್ರಾನ್‌ವಾಲೆ ಸಿಖ್ ಪ್ರತ್ಯೇಕತಾ ವಾದಿ ಗುಂಪು ಸಿಖ್‌ ಧರ್ಮದ ಪವಿತ್ರ ಮಂದಿರ ಸ್ವರ್ಣ ದೇವಾಲಯದೊಳಗೆ ಬಿಡಾರ ಹೂಡಿ, ಅಲ್ಲಿ ಶಸ್ತ್ರಾಸ್ತ್ರಗಳನ್ನು ಜಮಾಯಿಸುತ್ತಿತ್ತು.ಸ್ವರ್ಣ ಮಂದಿರ ಮತ್ತು ಆಸುಪಾಸಿನ ಕಟ್ಟಡಗಳಲ್ಲಿ ಸಾವಿರಾರು ನಾಗರಿಕರಿದ್ದಾಗಲೇ ಸೇನೆಯು ಗುಂಡು ಹಾರಿಸಿತು. ಇದರಿಂದ ಅನೇಕ ನಾಗರಿಕರು ಅನಾಹುತಕ್ಕೆ ತುತ್ತಾದರು.’ಆಪರೇಶನ್ ಬ್ಲೂ ಸ್ಟಾರ್’ ಕಾರ್ಯಾಚರಣೆಗೆ ಗಾಂಧಿ ನೀಡಿದ ಆದೇಶ ಅಂತರಾಷ್ಟ್ರೀಯ ಮಾಧ್ಯಮದಲ್ಲಿ ತೀವ್ರ ಖಂಡನೆಗೆ ಒಳಗಾಯಿತು.ಸೇನೆ ಮತ್ತು ನಾಗರಿಕರಿಗೆ ಉಂಟಾದ ಅನಾಹುತ ಎಷ್ಟು ಎಂಬ ಅಂಕಿಸಂಖ್ಯೆಯಲ್ಲಿ ಸರಕಾರ ನೀಡಿದ್ದಕ್ಕೂ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಕೊಟ್ಟಿದ್ದಕ್ಕೂ ವ್ಯತ್ಯಾಸವಿದೆ. 79 ಸೈನಿಕರು, ಮತ್ತು 492 ಸಿಖ್‌ರು ಅನಾಹುತಕ್ಕೆ ಈಡಾದರು ಎಂದು ಸರಕಾರ ಅಂದಾಜು ನೀಡಿದರೆ, ಅನೇಕ ಮಹಿಳೆಯರು ಮತ್ತು ಮಕ್ಕಳೂ ಒಳಗೊಂಡಂತೆ, ಸ್ವಯಂ ಸೇವಾ ಸಂಸ್ಥೆಗಳು ನೀಡುವ ಲೆಕ್ಕದ ಪ್ರಕಾರ 500 ಅಥವಾ ಅದಕ್ಕಿಂತ ಹೆಚ್ಚು ಯೋಧರು ಮತ್ತು 3,000 ಸಿಖ್‌ರು ಕಷ್ಟನಷ್ಟಕ್ಕೆ ಸಿಲುಕಿದರು. ಜೊತೆಗೆ ಅನೇಕ ಮಕ್ಕಳು ಮಹಿಳೆಯರು ಚಕಮಕಿಯಲ್ಲಿ ಘಾಸಿಗೊಂಡರು. ನಾಗರಿಕ ಅವಘಡಕ್ಕೆ ಸಂಬಂಧಿಸಿದ ನಿಖರ ಅಂಕಿಅಂಶ ವಿವಾದಕ್ಕೆ ಸಿಕ್ಕಿಬಿದ್ದರೆ, ಯೋಗ್ಯ ದಾಖಲೆಗಳ ಕೊರತೆ ಮತ್ತು ದಾಳಿ ನಡೆಸಿದ ಸಮಯ ಮತ್ತು ಅದಕ್ಕೆ ಅನುಸರಿಸಲಾದ ರೀತಿನೀತಿಯು ಕಟು ಟೀಕೆಗೆ ಒಳಗಾಯಿತು. ಇಂದಿರಾರ ಈ ಕಾರ್ಯಾಚರಣೆಯನ್ನು ಸಿಖ್‌ರ ವಿರುದ್ಧ ಅವರು ಮಾಡಿದ ವೈಯಕ್ತಿಕ ದಾಳಿ ಎಂದು ಖಂಡಿಸಲಾಯಿತು. ‘ಸಿಖ್‌ರಿಗೆ ಸ್ವಾತಂತ್ರ್ಯನೀಡಿ,ಅವರಿಗಾಗಿಯೇ ಖಲಿಸ್ಥಾನ ಎಂಬ ಪ್ರತ್ಯೇಕ ರಾಜ್ಯವನ್ನು ರಚಿಸಿ’ ಎಂಬಂಥ ಸರಕಾರ ವಿರೋಧೀ ನೀತಿಯನ್ನು ಬಿತ್ತುತ್ತಿದ್ದ ಉಗ್ರಗಾಮಿ ಭಿಂದ್ರನ್‌ವಾಲೆ ಮತ್ತು ಆತನ ಸಹಚರರನ್ನು ಹೊರದಬ್ಬುವುದೇ ಈ ಮುತ್ತಿಗೆಯ ಮೂಲ ಉದ್ದೇಶ ಎಂದು ಕಾರ್ಯಾಚರಣೆಯನ್ನು ಇಂದಿರಾ ಸಮರ್ಥಿಸಿಕೊಂಡರು. ಸಿಖ್‌ ಸಮುದಾಯಕ್ಕೆ ಸೇರಿದ ಸತ್ವಂತ್ ಸಿಂಗ್ ಮತ್ತು ಬಿಯಾಂತ್ ಸಿಂಗ್‌ ಎಂಬ ಗಾಂಧಿಯ ಅಂಗರಕ್ಷಕರಿಬ್ಬರು 1984ರ ಅಕ್ಟೋಬರ್ 31ರಂದು,1984ರ ಅಕ್ಟೋಬರ್ 31ರಂದು,ಸೇವಾ ಬಳಕೆಗಾಗಿ ಇದ್ದ ಆಯುಧಗಳಿಂದ ಅವರನ್ನು ಹತ್ಯೆಗೈದರು. ಈ ಹತ್ಯೆ ನಡೆದದ್ದು ನವದೆಹಲಿಯ ಪ್ರಧಾನ ಮಂತ್ರಿ ನಿವಾಸವಾಗಿದ್ದ ನವೆಂಬರ್ 1, ಸಫ್ದರ್ಜಂಗ್‌ ರಸ್ತೆಯಲ್ಲಿನ ಉದ್ಯಾನದಲ್ಲಿ. ಐರಿಷ್ ದೂರದರ್ಶನಕ್ಕೆ ಸಾಕ್ಷ್ಯಚಿತ್ರ ಚಿತ್ರೀಕರಿಸುತ್ತಿದ್ದ ಬ್ರಿಟಿಷ್ ನಟ ಪೀಟರ್ ಉಸ್ತಿನೊವ್‌ ಅವರಿಗೆ ಸಂದರ್ಶನ ನೀಡುವುದಕ್ಕಾಗಿ, ಇಂದಿರಾ ಸತ್ವಂತ್ ಮತ್ತು ಬಿಯಾಂತ್‌ ಕಾವಲಿನಲ್ಲಿದ್ದ ಕಿರು ದ್ವಾರವನ್ನು ದಾಟುತ್ತಿದ್ದಂತೆಯೇ ಈ ದುಷ್ಕೃತ್ಯ ನಡೆಯಿತು. ಇವರ ಬೆಂಗಾವಲಿನಲ್ಲಿ ವಿಕೆಟ್ ಗೇಟ್‌ನ್ನು ದಾಟಿದ್ದರು. ಘಟನೆ ಆಧಾರಿಸಿ ಈ ದುರ್ಘಟನೆ ನಡೆದಾಕ್ಷಣ ಲಭ್ಯವಾದ ಮಾಹಿತಿಯಂತೆ ಬಿಯಾಂತ್ ಸಿಂಗ್ ಪಾರ್ಶ್ವಾಯುಧವನ್ನು ಬಳಸಿ ಅವರಿಗೆ ಮೂರು ಬಾರಿ ಗುಂಡುಹಾರಿಸಿದರೆ, ಸತ್ವಂತ್ ಸಿಂಗ್ ಸ್ಟೆನ್ ಸಬ್‌ಮೆಷಿನ್ ಗನ್ ಬಳಸಿ 30 ಸುತ್ತು ಗುಂಡಿನ ಸುರಿಮಳೆಗರೆದ. ಕೂಡಲೇ ಬಿಯಾಂತ್‌ ಸಿಂಗ್‌ನನ್ನು ಗುಂಡಿಕ್ಕಿ ಕೊಂದ ಇನ್ನಿತರ ಅಂಗರಕ್ಷಕರು ಸತ್ವಂತ್ ಸಿಂಗ್‌ಗೂ ಗುಂಡು ಹಾರಿಸಿ ಬಂಧಿಸಿದರು. ಅವರ ಅಧಿಕೃತ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮಧ್ಯದಲ್ಲೇ ಇಂದಿರಾ ಕೊನೆಯುಸಿರೆಳೆದರಾದರೂ ಹಲವಾರು ಘಂಟೆಗಳ ಕಾಲ ಅವರ ಸಾವನ್ನು ಪ್ರಕಟಿಸಲಿಲ್ಲ.ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಗೆ ಅವರನ್ನು ಕೊಂಡೊಯ್ಯಲಾಯಿತು. ಅಲ್ಲಿ ವೈದ್ಯಕೀಯ ತಪಾಸಣೆ ನಡೆಯಿತು. 29 ಗುಂಡುಗಳು ದೇಹದ ಒಳ ಹೊಕ್ಕು ಹೊರ ಬಂದ ಗಾಯಗಳು ಇದ್ದವು ಎಂದು ಅಧಿಕೃತ ಮೂಲಗಳು ಹೇಳಿದರೆ, 31 ಗುಂಡುಗಳನ್ನು ಅವರ ದೇಹದಿಂದ ಹೊರಗೆ ತೆಗೆಯಲಾಯಿತು ಎಂದು ಮಿಕ್ಕ ಕೆಲವು ವರದಿಗಳು ಹೇಳುತ್ತವೆ. ಅವರ ಪಾರ್ಥಿವ ಶರೀರವನ್ನು ರಾಜ್ ಘಟ್ ಸಮೀಪ ನವೆಂಬರ್ 3ರಂದು ‌ದಹಿಸಲಾಯಿತು. ಅವರ ಮರಣದ ನಂತರ, ಇಂದಿರಾಗೆ ನಿಷ್ಠರಾಗಿದ್ದ ಕೆಲವು ಕಾಂಗ್ರೆಸ್ ರಾಜಕಾರಣಿಗಳಿಂದಮತಾಂಧ ಅಭಿಮಾನ ಉಕ್ಕೇರಿತು. ನವದೆಹಲಿ ಮತ್ತು ಭಾರತದ ಅನೇಕ ಇತರ ನಗರಗಳಲ್ಲಿ ಸಿಖ್-ವಿರೋಧೀ ದಂಗೆ ತಲೆ ಎತ್ತಿತು. ದಂಗೆ ಹಿಂಸಾಚಾರಕ್ಕೆ ಇಳಿಯಿತು. ಸಾವಿರಾರು ಮುಗ್ದ ಸಿಖ್‌ರು ಇದಕ್ಕೆ ಬಲಿಯಾದರು. ಅವರ ಮನೆಗಳಿಗೆ ಬೆಂಕಿ ಇಡಲಾಯಿತು. ಆಸ್ತಿ ಪಾಸ್ತಿ ಮತ್ತು ಸಂಪತ್ತು ಲೂಟಿಯಾದವು. ಆಪರೇಶನ್ ಬ್ಲೂ ಸ್ಟಾರ್‌ನ ಪರಿಣಾಮವಾಗಿ ಏನಾಗುತ್ತದೆಯೊ ಎಂಬ ಇಂದಿರಾಗೆ ಇದ್ದ ಆತಂಕ ಮತ್ತು ತಳಮಳವನ್ನು ಅವರ ಗೆಳೆಯ ಮತ್ತು ಜೀವನ ಚರಿತ್ರೆಕಾರ ಪುಪುಲ್ ಜಯಕರ್‌ ನಂತರ ಹೊರಗೆಡವಿದರು. ಪವಿತ್ರ ಸ್ವರ್ಣ ಮಂದಿರದ ಮೇಲೆ ನಡೆಸಲಾದ ದಾಳಿಗೆ ಎದುರಾಗಿ ಗಾಂಧಿ ಅಂಗರಕ್ಷಕರಾದ ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್ ಈ ರೀತಿ ಪ್ರತೀಕಾರ ತೀರಿಸಿಕೊಂಡರು.

FAQ

ಇಂದಿರಾಗಾಂಧಿಯವರ ಗಂಡನ ಹೆಸರೇನು ?

ಫಿರೋಜ್ ಗಾಂಧಿ

ಇಂದಿರಾಗಾಂಧಿ ಯವರು ಎಷ್ಟರಲ್ಲಿ ಜನಿಸಿದರು ?

ನವೆಂಬರ್ 19, 1917ರಂದು ಜನಿಸಿದರು.

ಇತರೆ ವಿಷಯಗಳು :

ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಗಾದೆ ಮಾತು ವಿಸ್ತರಣೆ 

ಅಪ್ಪನ ಬಗ್ಗೆ ಪ್ರಬಂಧ

LEAVE A REPLY

Please enter your comment!
Please enter your name here